ಬ್ರೇಕಿಂಗ್ ನ್ಯೂಸ್
25-02-22 07:39 pm HK Desk news ಕ್ರೈಂ
ಶಿವಮೊಗ್ಗ, ಫೆ.25 : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹತ್ತು ಮಂದಿಯನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ವಿಚಾರಣೆ ಬಳಿಕ ಬೇರೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತಿಳಿಯಲಿದೆ. 14 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷನ ಕೊಲೆಗೆ ಬಳಸಿದ್ದ ಕಾರನ್ನು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ವಿಡಿಯೋ ಕಾಲ್ ಮಾಡಿದವರ ಪತ್ತೆ
ಕೊಲೆಯಾದ ಹರ್ಷನ ಮೊಬೈಲ್ ಫೋನ್ ಇದುವರೆಗೂ ಪತ್ತೆಯಾಗಿಲ್ಲ. ಆದರೆ ಆತನಿಗೆ ಕೊಲೆಯಾಗೋದಕ್ಕೂ ಮುನ್ನ ವೀಡಿಯೋ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ವಿಡಿಯೋ ಕರೆ ಮಾಡಿದವರಿಗೂ ಹಂತಕರಿಗೂ ಯಾವುದೇ ಸಂಬಂಧ ಇಲ್ಲ. ಅದರ ಬಗ್ಗೆ ವಿಚಾರಣೆ ಮಾಡಿದ್ದೇವೆ. ಮೆರವಣಿಗೆ ವೇಳೆ ಪೊಲೀಸರಿಗೆ ಲಾಂಗ್- ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದು ಗೊತ್ತಾಗಿದೆ. ಸಿಸಿಟಿವಿ ಆಧರಿಸಿ ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
ಹರ್ಷ ಕೊಲೆ ಪ್ರಕರಣದಲ್ಲಿ ಸಾತು ಆ್ಯಂಡ್ ಗ್ಯಾಂಗ್ ಭಾಗಿಯಾಗಿತ್ತೇ ಎಂಬ ಪ್ರಶ್ನೆಗೆ, ಆ ಬಗ್ಗೆ ತನಿಖೆ ನಡೆಸುತಿದ್ದೇವೆ. ಕೊಲೆ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಫ್ನಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆಗೆ ಧಕ್ಕೆ ಎಸಗಿದ ಕೋಮು ವೈಷಮ್ಯದ ಪ್ರಕರಣಗಳಿವೆ. ಉಳಿದಂತೆ ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ಧರ್ಮ ದ್ವೇಷ ಸಂಬಂಧಿಸಿದ ಎರಡು ಪ್ರಕರಣ ದಾಖಲಾಗಿತ್ತು ಎಂದು ಎಸ್ಪಿ ಹೇಳಿದರು.
Harsha Murder case 10 arrested so far, investigating organisation support angle says SP Lakshmi Prasad.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am