ಬ್ರೇಕಿಂಗ್ ನ್ಯೂಸ್
25-02-22 11:00 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.25 : ಧರ್ಮಸ್ಥಳ ಭಾಗದಲ್ಲಿ ಬಜರಂಗದಳ ಮತ್ತು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಗೆ ಕ್ಷುಲ್ಲಕ ಕಾರಣಕ್ಕೆ ತುಳಿದು ಹಲ್ಲೆಗೊಳಿಸಿದ ಘಟನೆ ನಡೆದಿದ್ದು, ತರುವಾಯ ಎರಡು ದಿನಗಳ ಬಳಿಕ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆಯಾದ ವ್ಯಕ್ತಿ ದಿನೇಶ್ ನಾಯ್ಕ (41) ಎಂಬವನಾಗಿದ್ದು, ಆರೋಪಿಯನ್ನು ಕಿಟ್ಟ ಅಲಿಯಾಸ್ ಕೃಷ್ಣ ಡಿ. ಎಂದು ಗುರುತಿಸಲಾಗಿದೆ. ಫೆ.23ರಂದು ದಿನೇಶ್ ನಾಯ್ಕ, ಕೃಷ್ಣನಿಗೆ ಸೇರಿದ ಅಂಗಡಿಯ ಮುಂದೆ ಬಂದು ಜಾಗದ ದಾಖಲೆಗಳನ್ನು ಮಾಡಿಕೊಟ್ಟಿರುವ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಕೃಷ್ಣ, ದಿನೇಶ ನಾಯ್ಕನ ಮೇಲೆ ಹಲ್ಲೆಗೈದು ಹೊಟ್ಟೆಗೆ ತುಳಿದಿದ್ದ. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ದಿನೇಶ ನಾಯ್ಕ ಮನೆಗೆ ತೆರಳಿ, ಆಗಿರುವ ವಿಚಾರವನ್ನು ಮನೆಯವರಲ್ಲಿ ಹೇಳಿ ನೋವಿನಲ್ಲಿ ಮಲಗಿದ್ದ.
ಆನಂತರ, ಹೊಟ್ಟೆಯ ಭಾಗಕ್ಕೆ ಹಲ್ಲೆಯಾಗಿದ್ದರಿಂದ ನೋವಿನಿಂದ ಬಳಲುತ್ತಿದ್ದ ಮಗನ ಬಗ್ಗೆ, ದಿನೇಶ್ ನಾಯ್ಕನ ತಾಯಿ ಆರೋಪಿ ಕೃಷ್ಣನ ಬಳಿಗೆ ಬಂದು, ನೀನು ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿದ್ದಾನೆ. ನನಗೆ ಆತನನ್ನು ಆಸ್ಪತ್ರೆಗೆ ಒಯ್ಯಲು ಹಣ ಇಲ್ಲ. ನೀನೇ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿದ್ದರು. ಅದರಂತೆ, ಆರೋಪಿ ಕೃಷ್ಣ, ದಿನೇಶ್ ನಾಯ್ಕನನ್ನು ಆತನ ಪತ್ನಿಯ ಜೊತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದ. ಅಲ್ಲದೆ, ವೈದ್ಯರಲ್ಲಿ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಿದ್ದ. ಆದರೆ ದಿನೇಶ್ ಫೆ.25ರಂದು ನಸುಕಿನಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇದರ ಬಗ್ಗೆ ದಿನೇಶ್ ನಾಯ್ಕನ ತಾಯಿ ಪದ್ಮಾವತಿ, ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಕೃಷ್ಣನ ಹಲ್ಲೆಯಿಂದಲೇ ಮೃತಪಟ್ಟಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
Dharmasthala BJP member alleged of assault and Murder, case filed. The deceased has been identified as Dinesh Nayak.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am