ಬ್ರೇಕಿಂಗ್ ನ್ಯೂಸ್
25-02-22 11:00 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.25 : ಧರ್ಮಸ್ಥಳ ಭಾಗದಲ್ಲಿ ಬಜರಂಗದಳ ಮತ್ತು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಗೆ ಕ್ಷುಲ್ಲಕ ಕಾರಣಕ್ಕೆ ತುಳಿದು ಹಲ್ಲೆಗೊಳಿಸಿದ ಘಟನೆ ನಡೆದಿದ್ದು, ತರುವಾಯ ಎರಡು ದಿನಗಳ ಬಳಿಕ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆಯಾದ ವ್ಯಕ್ತಿ ದಿನೇಶ್ ನಾಯ್ಕ (41) ಎಂಬವನಾಗಿದ್ದು, ಆರೋಪಿಯನ್ನು ಕಿಟ್ಟ ಅಲಿಯಾಸ್ ಕೃಷ್ಣ ಡಿ. ಎಂದು ಗುರುತಿಸಲಾಗಿದೆ. ಫೆ.23ರಂದು ದಿನೇಶ್ ನಾಯ್ಕ, ಕೃಷ್ಣನಿಗೆ ಸೇರಿದ ಅಂಗಡಿಯ ಮುಂದೆ ಬಂದು ಜಾಗದ ದಾಖಲೆಗಳನ್ನು ಮಾಡಿಕೊಟ್ಟಿರುವ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಕೃಷ್ಣ, ದಿನೇಶ ನಾಯ್ಕನ ಮೇಲೆ ಹಲ್ಲೆಗೈದು ಹೊಟ್ಟೆಗೆ ತುಳಿದಿದ್ದ. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ದಿನೇಶ ನಾಯ್ಕ ಮನೆಗೆ ತೆರಳಿ, ಆಗಿರುವ ವಿಚಾರವನ್ನು ಮನೆಯವರಲ್ಲಿ ಹೇಳಿ ನೋವಿನಲ್ಲಿ ಮಲಗಿದ್ದ.
ಆನಂತರ, ಹೊಟ್ಟೆಯ ಭಾಗಕ್ಕೆ ಹಲ್ಲೆಯಾಗಿದ್ದರಿಂದ ನೋವಿನಿಂದ ಬಳಲುತ್ತಿದ್ದ ಮಗನ ಬಗ್ಗೆ, ದಿನೇಶ್ ನಾಯ್ಕನ ತಾಯಿ ಆರೋಪಿ ಕೃಷ್ಣನ ಬಳಿಗೆ ಬಂದು, ನೀನು ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿದ್ದಾನೆ. ನನಗೆ ಆತನನ್ನು ಆಸ್ಪತ್ರೆಗೆ ಒಯ್ಯಲು ಹಣ ಇಲ್ಲ. ನೀನೇ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿದ್ದರು. ಅದರಂತೆ, ಆರೋಪಿ ಕೃಷ್ಣ, ದಿನೇಶ್ ನಾಯ್ಕನನ್ನು ಆತನ ಪತ್ನಿಯ ಜೊತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದ. ಅಲ್ಲದೆ, ವೈದ್ಯರಲ್ಲಿ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಿದ್ದ. ಆದರೆ ದಿನೇಶ್ ಫೆ.25ರಂದು ನಸುಕಿನಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇದರ ಬಗ್ಗೆ ದಿನೇಶ್ ನಾಯ್ಕನ ತಾಯಿ ಪದ್ಮಾವತಿ, ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಕೃಷ್ಣನ ಹಲ್ಲೆಯಿಂದಲೇ ಮೃತಪಟ್ಟಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
Dharmasthala BJP member alleged of assault and Murder, case filed. The deceased has been identified as Dinesh Nayak.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm