ಬ್ರೇಕಿಂಗ್ ನ್ಯೂಸ್
25-02-22 11:00 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.25 : ಧರ್ಮಸ್ಥಳ ಭಾಗದಲ್ಲಿ ಬಜರಂಗದಳ ಮತ್ತು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಗೆ ಕ್ಷುಲ್ಲಕ ಕಾರಣಕ್ಕೆ ತುಳಿದು ಹಲ್ಲೆಗೊಳಿಸಿದ ಘಟನೆ ನಡೆದಿದ್ದು, ತರುವಾಯ ಎರಡು ದಿನಗಳ ಬಳಿಕ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆಯಾದ ವ್ಯಕ್ತಿ ದಿನೇಶ್ ನಾಯ್ಕ (41) ಎಂಬವನಾಗಿದ್ದು, ಆರೋಪಿಯನ್ನು ಕಿಟ್ಟ ಅಲಿಯಾಸ್ ಕೃಷ್ಣ ಡಿ. ಎಂದು ಗುರುತಿಸಲಾಗಿದೆ. ಫೆ.23ರಂದು ದಿನೇಶ್ ನಾಯ್ಕ, ಕೃಷ್ಣನಿಗೆ ಸೇರಿದ ಅಂಗಡಿಯ ಮುಂದೆ ಬಂದು ಜಾಗದ ದಾಖಲೆಗಳನ್ನು ಮಾಡಿಕೊಟ್ಟಿರುವ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಕೃಷ್ಣ, ದಿನೇಶ ನಾಯ್ಕನ ಮೇಲೆ ಹಲ್ಲೆಗೈದು ಹೊಟ್ಟೆಗೆ ತುಳಿದಿದ್ದ. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ದಿನೇಶ ನಾಯ್ಕ ಮನೆಗೆ ತೆರಳಿ, ಆಗಿರುವ ವಿಚಾರವನ್ನು ಮನೆಯವರಲ್ಲಿ ಹೇಳಿ ನೋವಿನಲ್ಲಿ ಮಲಗಿದ್ದ.
ಆನಂತರ, ಹೊಟ್ಟೆಯ ಭಾಗಕ್ಕೆ ಹಲ್ಲೆಯಾಗಿದ್ದರಿಂದ ನೋವಿನಿಂದ ಬಳಲುತ್ತಿದ್ದ ಮಗನ ಬಗ್ಗೆ, ದಿನೇಶ್ ನಾಯ್ಕನ ತಾಯಿ ಆರೋಪಿ ಕೃಷ್ಣನ ಬಳಿಗೆ ಬಂದು, ನೀನು ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿದ್ದಾನೆ. ನನಗೆ ಆತನನ್ನು ಆಸ್ಪತ್ರೆಗೆ ಒಯ್ಯಲು ಹಣ ಇಲ್ಲ. ನೀನೇ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿದ್ದರು. ಅದರಂತೆ, ಆರೋಪಿ ಕೃಷ್ಣ, ದಿನೇಶ್ ನಾಯ್ಕನನ್ನು ಆತನ ಪತ್ನಿಯ ಜೊತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದ. ಅಲ್ಲದೆ, ವೈದ್ಯರಲ್ಲಿ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಿದ್ದ. ಆದರೆ ದಿನೇಶ್ ಫೆ.25ರಂದು ನಸುಕಿನಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇದರ ಬಗ್ಗೆ ದಿನೇಶ್ ನಾಯ್ಕನ ತಾಯಿ ಪದ್ಮಾವತಿ, ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಕೃಷ್ಣನ ಹಲ್ಲೆಯಿಂದಲೇ ಮೃತಪಟ್ಟಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
Dharmasthala BJP member alleged of assault and Murder, case filed. The deceased has been identified as Dinesh Nayak.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am