ಬ್ರೇಕಿಂಗ್ ನ್ಯೂಸ್
25-02-22 11:00 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.25 : ಧರ್ಮಸ್ಥಳ ಭಾಗದಲ್ಲಿ ಬಜರಂಗದಳ ಮತ್ತು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಗೆ ಕ್ಷುಲ್ಲಕ ಕಾರಣಕ್ಕೆ ತುಳಿದು ಹಲ್ಲೆಗೊಳಿಸಿದ ಘಟನೆ ನಡೆದಿದ್ದು, ತರುವಾಯ ಎರಡು ದಿನಗಳ ಬಳಿಕ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆಯಾದ ವ್ಯಕ್ತಿ ದಿನೇಶ್ ನಾಯ್ಕ (41) ಎಂಬವನಾಗಿದ್ದು, ಆರೋಪಿಯನ್ನು ಕಿಟ್ಟ ಅಲಿಯಾಸ್ ಕೃಷ್ಣ ಡಿ. ಎಂದು ಗುರುತಿಸಲಾಗಿದೆ. ಫೆ.23ರಂದು ದಿನೇಶ್ ನಾಯ್ಕ, ಕೃಷ್ಣನಿಗೆ ಸೇರಿದ ಅಂಗಡಿಯ ಮುಂದೆ ಬಂದು ಜಾಗದ ದಾಖಲೆಗಳನ್ನು ಮಾಡಿಕೊಟ್ಟಿರುವ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಕೃಷ್ಣ, ದಿನೇಶ ನಾಯ್ಕನ ಮೇಲೆ ಹಲ್ಲೆಗೈದು ಹೊಟ್ಟೆಗೆ ತುಳಿದಿದ್ದ. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ದಿನೇಶ ನಾಯ್ಕ ಮನೆಗೆ ತೆರಳಿ, ಆಗಿರುವ ವಿಚಾರವನ್ನು ಮನೆಯವರಲ್ಲಿ ಹೇಳಿ ನೋವಿನಲ್ಲಿ ಮಲಗಿದ್ದ.
ಆನಂತರ, ಹೊಟ್ಟೆಯ ಭಾಗಕ್ಕೆ ಹಲ್ಲೆಯಾಗಿದ್ದರಿಂದ ನೋವಿನಿಂದ ಬಳಲುತ್ತಿದ್ದ ಮಗನ ಬಗ್ಗೆ, ದಿನೇಶ್ ನಾಯ್ಕನ ತಾಯಿ ಆರೋಪಿ ಕೃಷ್ಣನ ಬಳಿಗೆ ಬಂದು, ನೀನು ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿದ್ದಾನೆ. ನನಗೆ ಆತನನ್ನು ಆಸ್ಪತ್ರೆಗೆ ಒಯ್ಯಲು ಹಣ ಇಲ್ಲ. ನೀನೇ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿದ್ದರು. ಅದರಂತೆ, ಆರೋಪಿ ಕೃಷ್ಣ, ದಿನೇಶ್ ನಾಯ್ಕನನ್ನು ಆತನ ಪತ್ನಿಯ ಜೊತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದ. ಅಲ್ಲದೆ, ವೈದ್ಯರಲ್ಲಿ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಿದ್ದ. ಆದರೆ ದಿನೇಶ್ ಫೆ.25ರಂದು ನಸುಕಿನಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇದರ ಬಗ್ಗೆ ದಿನೇಶ್ ನಾಯ್ಕನ ತಾಯಿ ಪದ್ಮಾವತಿ, ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಕೃಷ್ಣನ ಹಲ್ಲೆಯಿಂದಲೇ ಮೃತಪಟ್ಟಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
Dharmasthala BJP member alleged of assault and Murder, case filed. The deceased has been identified as Dinesh Nayak.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm