ಬ್ರೇಕಿಂಗ್ ನ್ಯೂಸ್
27-02-22 04:53 pm HK Desk news ಕ್ರೈಂ
ಬೆಳಗಾವಿ, ಫೆ 27 : ನಿತ್ಯ ಲಕ್ಷಾಂತರ ರೂಪಾಯಿ ಪೆಟ್ರೋಲ್ ಬಂಕ್ ಮಾಲೀಕನ ಅಕೌಂಟ್ಗೆ ಜಮಾವಣೆ ಆಗ್ತಿತ್ತು. ಇತ್ತ ಲೆಕ್ಕಕ್ಕೆ ಲೆಕ್ಕವೂ ಇರ್ತಿತ್ತು. ಆದರೆ, ಪಂಪ್ನ ಮಾಲೀಕ ಮಾತ್ರ ಲಾಸ್ ಅನುಭವಿಸುತ್ತಿದ್ದ. ಒಂದೂವರೆ ವರ್ಷದ ಬಳಿಕ ಬಂಕ್ ಮಾಲೀಕ ತನಗೆ ಆಗ್ತಿರುವ ಹಾನಿ ಕುರಿತು ಠಾಣೆ ಮೇಟ್ಟಿಲೇರಿದ್ದ. ಈ ವೇಳೆ ಸಿಕ್ಕಿದ್ದೇ ಅದೊಬ್ಬ ಖದೀಮನ ಫೋನ್ ಪೇ ಗಿಮಿಕ್ ವಂಚನೆ.
ಬೆಳಗಾವಿ ಫೋನ್ ಪೇ ವಂಚನೆ ಪ್ರಕರಣ ನಗರದ ಮಚ್ಚೆಯಲ್ಲಿರುವ ಸೋಮನಾಥ್ ಪೆಟ್ರೋಲ್ ಬಂಕ್ನ ಮಾಲೀಕ ಸುನೀಲ್ ಶಿಂಧೆ ಮೋಸ ಹೋದ ಮಾಲೀಕ. ರೋಹಿತ್ ರಾಜು ಮೋಸ ಮಾಡಿದಾತ. ಈತ ಕಳೆದ ಮೂರು ವರ್ಷದಿಂದ ಸುನೀಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಖದೀಮ ಒಂದು ವರ್ಷದಲ್ಲಿ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ.ಗಳನ್ನು ವಂಚಿಸಿದ್ದಾನೆ ಎಂದು ತಿಳಿದು ಬಂದಿದೆ.
ಫೋನ್ ಪೇ ಅಸ್ತ್ರ;
ಇತ್ತಿಚೀನ ದಿನಗಳಲ್ಲಿ ಹೆಚ್ಚಾಗಿ ವಾಹನ ಸವಾರರು ಪೆಟ್ರೋಲ್ ಬಂಕ್ಗಳಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ಜನ ಪೇಮೆಂಟ್ ಮಾಡ್ತಿದ್ದಾರೆ. ವ್ಯಾಪಾರಸ್ಥರಿಗೆ ಮಾತ್ರ ಈ ಫೋನ್ ಪೇ ಆಯಪ್ನವರು ಹಣ ಮರು ಪಾವತಿಗೆ ವ್ಯವಸ್ಥೆ ಮಾಡಿದ್ದಾರೆ. ಕೆಲವೊಮ್ಮೆ ವಾಹನ ಸವಾರರು ನೂರು ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು ಸಾವಿರ ರೂಪಾಯಿ ಫೋನ್ ಪೇ ಮಾಡ್ತಾರೆ. ಆಗ ಅವರಿಗೆ ಹಣ ಹಿಂತಿರುಗಿಸಬೇಕಾಗುತ್ತದೆ. ಈ ವೇಳೆ, ಕ್ಯಾಶ್ ಕೊಡಲು ಬರುವುದಿಲ್ಲ. ಆಗ ಫೋನ್ ಪೇದಲ್ಲೇ ಈ ರಿಫಂಡ್ ಆಪ್ಷನ್ ಬಳಸಿಕೊಂಡು ಉಳಿದ ಹಣ ಮರಳಿಸಬಹುದು. ಇದೇ ಮಾರ್ಗವನ್ನು ಬಳಸಿಕೊಂಡ ಖದೀಮ ನಿತ್ಯವೂ ತನ್ನ ನಂಬರ್ನಿಂದ ಪಂಪ್ ನಂಬರ್ಗೆ ಎಂಟು ಸಾವಿರ ರೂ. ಫೋನ್ ಪೇ ಮಾಡುತ್ತಿದ್ದ. ಹೀಗೆ ಮಾಡಿ ಮಾಲೀಕನಿಗೆ ಲೆಕ್ಕವನ್ನೂ ಕೊಡುತ್ತಿದ್ದ. ಇದಾದ ಬಳಿಕ ರಾತ್ರಿ ಮನೆಗೆ ವಾಪಸ್ ಆಗುವಾಗ ಪಂಪ್ ನಂಬರ್ನಿಂದ ಮತ್ತೆ ತನ್ನ ಅಕೌಂಟ್ಗೆ ತಾನು ಹಾಕಿದ ಹಣವನ್ನು ರಿಫಂಡ್ ಮಾಡಿಕೊಳ್ಳುತ್ತಿದ್ದ.

44 ಲಕ್ಷ ಹಣ ಎಗರಿಸಿದ ಖದೀಮ:
ಹೀಗೆ ರಿಫಂಡ್ ಆದ ಹಣದ ಮೇಸೆಜ್ ಅನ್ನು ಕೂಡಲೇ ಡಿಲಿಟ್ ಮಾಡಿ ತೆರಳುತ್ತಿದ್ದ. ದಿನಕ್ಕೆ 200 ರಿಂದ 300 ಜನ ಫೋನ್ ಪೇಯಿಂದ ಹಣ ವರ್ಗಾವಣೆ ಮಾಡುತ್ತಿದ್ದು, ಯಾರಿಗೆ ರಿಫಂಡ್ ಆಗಿದೆ ಅನ್ನೋದನ್ನು ಮಾಲೀಕ ನೋಡಲು ಹೋಗುತ್ತಿರಲಿಲ್ಲ. ಇದನ್ನು ಬಳಸಿಕೊಂಡು ಸಿಬ್ಬಂದಿ ರೋಹಿತ್ ಒಂದೂವರೆ ವರ್ಷದಲ್ಲಿ 44 ಲಕ್ಷ ರೂ. ಎಗರಿಸಿದ್ದಾನೆ.

ಠಾಣೆ ಮೆಟ್ಟಿಲೇರಿದಾಗ ಸತ್ಯ ಬಯಲು:
ದಿನೇ ದಿನೆ ಲಾಸ್ ಆಗುವ ಕಾರಣಕ್ಕೆ ಕಂಗಾಲಾದ ಮಾಲೀಕ ಕೊನೆಗೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ವೇಳೆ ಬ್ಯಾಂಕ್ನ ವಹಿವಾಟು ನೋಡಿದಾಗ ಬಂಕ್ ಸಿಬ್ಬಂದಿ ರೋಹಿತ್ ನಂಬರ್ಗೆ ನಿತ್ಯವೂ ಹಣ ರಿಫಂಡ್ ಆಗುವುದು ಗೊತ್ತಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಿಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತನಿಂದ 28 ಲಕ್ಷ ಹಣ ವಸೂಲಿ ಮಾಡಿದ್ದು, ಇನ್ನುಳಿದ ಹಣವನ್ನು ವಸೂಲಿ ಮಾಡಿಕೊಡುವುದಾಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Belagavi petrol pump over cheated of 44 lakhs via phone pay and google pay, employee held.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am