ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am