ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm