ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm