ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm