ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm