ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm