ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm