ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am