ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm