ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm