ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm