ಬ್ರೇಕಿಂಗ್ ನ್ಯೂಸ್
02-03-22 05:09 pm Mangalore Correspondent ಕ್ರೈಂ
ಮಂಗಳೂರು, ಮಾ.2: ನಗರದ ಬೆಂದೂರ್ ವೆಲ್ ನ ಆಪಾರ್ಟ್ಮೆಂಟ್ ಒಂದರ ಮನೆಯನ್ನೇ ಕೇಂದ್ರೀಕರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದು ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಬೆಂದೂರ್ ವೆಲ್ 3ನೇ ಕ್ರಾಸ್ ರಸ್ತೆಯಲ್ಲಿರುವ PEEBI ರೆಸಿಡೆನ್ಸಿ ಎಂಬ ಅಪಾರ್ಟ್ಮೆಂಟಿನ 2 ನೇ ಮಹಡಿಯ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿತ್ತು. ಹಣ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಬಳಸಿಕೊಂಡು ಅನೈತಿಕ ಚಟುವಟಿಕೆ ನಡೆಸುತ್ತಿದ್ದುದನ್ನು ಪತ್ತೆ ಮಾಡಿದ್ದಾರೆ.
ವಿಟ್ಲ ಪಡ್ನೂರು ಗ್ರಾಮದ ಪರ್ತಿಪಾಡಿ ನಿವಾಸಿ ಕೆ.ಪಿ. ಹಮೀದ್(54), ಆಕಾಶಭವನ ಬಳಿಯ ನಿವಾಸಿ ಅನುಪಮ ಶೆಟ್ಟಿ(46), ಎಕ್ಕೂರು ನಿವಾಸಿ ನಿಶ್ಮಿತ(23) ಬಂಧಿತರು. ಈ ಮೂವರು ಪಿಂಪ್ ಗಳಾಗಿ ಕೆಲಸ ಮಾಡುತ್ತಿದ್ದರು. ಅವರ ಬಳಿಯಿಂದ 5 ಮೊಬೈಲ್ ಫೋನ್ ಹಾಗೂ 50,000 ರೂ. ನಗದು, ಮಾರುತಿ 800 ಕಾರನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ನಾಲ್ವರು ಮಹಿಳೆಯರಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಅವರ ವಶಕ್ಕೆ ನೀಡಲಾಗಿದೆ.
ಇತ್ತೀಚೆಗೆ ಇದೇ ಮಾದರಿಯಲ್ಲಿ ನಂದಿಗುಡ್ಡದ ಅಪಾರ್ಟ್ಮೆಂಟಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದುದನ್ನು ಪೊಲೀಸರು ಪತ್ತೆ ಮಾಡಿದ್ದರು. ಅದರಲ್ಲಿ ಕಾಲೇಜಿನ ಹರೆಯದ ಯುವತಿಯರನ್ನು ಕೃತ್ಯಕ್ಕೆ ಬಳಸಿಕೊಂಡಿದ್ದು ಪತ್ತೆಯಾಗಿತ್ತು.
City crime branch police here arrested three persons including two women in connection to a prostitution racket on Tuesday March 1. The arrested are identified as K P Hameed (54) from Vitlapadnur, Anupama Shetty (46) from Akashbhavana and Nishmitha (23) from Kulkunda Subramanya. It is said that the three accused where running a prostitution racket at Bendorwell Peebi residency which falls under Kadri police station limits. Four girls have been rescued.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm