ಬ್ರೇಕಿಂಗ್ ನ್ಯೂಸ್
04-03-22 12:33 pm Mangalore Correspondent ಕ್ರೈಂ
ಪುತ್ತೂರು, ಮಾ.4: ತಾಯಿ, ಮಕ್ಕಳು ಉರೂಸು ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಕಪಾಟು ಒಡೆದು ಚಿನ್ನಾಭರಣ, ನಗದು ಲೂಟಿಗೈದ ಘಟನೆ ಕಡಬ ತಾಲೂಕಿನ ಕೊಯ್ಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಅಬುಬಕ್ಕರ್ ಎಂಬವರ ಪತ್ನಿ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಲ್ಲಿ ವಾಸವಿದ್ದು ಗಂಡ ಮತ್ತು ಮೂವರು ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯುತ್ತಿದ್ದ ದ್ಸಿಕ್ರ್ ಹಲ್ಕಾ ವಾರ್ಷಿಕ ಉತ್ಸವಕ್ಕೆಂದು ತೆರಳಿದ್ದರು. ರಾತ್ರಿ 11 ಗಂಟೆಗೆ ಮರಳಿ, ಮನೆಯ ಬೀಗ ತೆಗೆದು ನೋಡಿದಾಗ ಬಟ್ಟೆ ಬರೆಗಳು ಚೆಲ್ಲಾಪಿಲ್ಲಿಯಾಗಿದ್ದವು. ಮನೆಯ ಮೇಲಿನ ಸಿಮೆಂಟ್ ಶೀಟನ್ನು ತೆಗೆದು ಯಾರೋ ಮನೆಗೆ ನುಗ್ಗಿದ್ದು ಕಪಾಟಿನಲ್ಲಿದ್ದ 40 ಗ್ರಾಮ್ ತೂಕದ ಚಿನ್ನದ ನೆಕ್ಲೆಸ್, 20 ಗ್ರಾಂ ತೂಕದ ಚಿನ್ನದ ಫಿಟ್ ನೆಕ್ಲೆಸ್, 10 ಗ್ರಾಮ್ ತೂಕದ ಐದು ಚಿನ್ನದ ಉಂಗುರಗಳು ಹಾಗೂ 20 ಗ್ರಾಮ್ ತೂಕದ ಹೊಸ ಚಿನ್ನದ ನೆಕ್ಲೆಸ್ ಒಟ್ಟು 93 ಗ್ರಾಮ್ ಚಿನ್ನಾಭರಣ ಮತ್ತು 10,700 ರೂಪಾಯಿ ನಗದನ್ನು ಕಳವು ಮಾಡಿದ್ದಾರೆ.
ಈ ಬಗ್ಗೆ ಮರಿಯಮ್ಮ ಇಂದು ಬೆಳಗ್ಗೆ 6 ಗಂಟೆಗೆ ಕಡಬ ಠಾಣೆಗೆ ಬಂದು ದೂರು ನೀಡಿದ್ದಾರೆ. ಕಳವಾದ ಚಿನ್ನದ ಒಟ್ಟು ಮೌಲ್ಯ 3.27 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮನೆಮಂದಿ ಸಂಜೆ ಉರೂಸಿಗೆ ತೆರಳಿರುವ ವಿಚಾರ ತಿಳಿದಿರುವ ವ್ಯಕ್ತಿಗಳೇ ಕಳವು ಕೃತ್ಯ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
The court here has sentenced one of the two thieves who broke open the door latch of the residence of one Mahendra Kumar in Kemminje village, Puttur taluk between March 14 and 6, 2006 and stole jewellery worth Rs 43,000 weighing 50.930 gram from the suitcase in the house.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm