ಬ್ರೇಕಿಂಗ್ ನ್ಯೂಸ್
04-03-22 02:12 pm Bengaluru Correspondent ಕ್ರೈಂ
ಬೆಂಗಳೂರು, ಮಾ.4: ಏರ್ಟೆಲ್ ಸಿಮ್ ಹೊಂದಿರುವ ಗ್ರಾಹಕರೇ ಎಚ್ಚರ. ನಿಮ್ಮ ಹೆಸರಲ್ಲೇ ಸಿಮ್ ಪಡೆದು ಸೈಬರ್ ವಂಚನೆ ಮಾಡೋರಿದ್ದಾರೆ, ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಏರ್ಟೆಲ್ ಕಂಪನಿಯ ಇಬ್ಬರು ಎಕ್ಸಿಕ್ಯುಟಿವ್ ಗಳನ್ನೇ ಬಂಧಿಸಿದ್ದಾರೆ.
ಹರ್ಷ(24) ಹಾಗೂ ಚೇತನ್(27) ಬಂಧಿತ ಆರೋಪಿಗಳು. ಕಳೆದ ಜನವರಿಯಲ್ಲಿ ರಾಜೇಶ್ವರ್ ಎಂಬ ಸೈಬರ್ ವಂಚಕನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ರೇವಾ ಯುನಿವರ್ಸಿಟಿಯಲ್ಲಿ ಸೀಟು ಕೊಡಿಸೋದಾಗಿ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿತ್ತು. ಆತನ ಸಿಮ್ ತಪಾಸಣೆ ನಡೆಸಿದಾಗ, ನಕಲಿ ಸಿಮ್ ಮೂಲಕ ಕರೆ ಮಾಡಿದ್ದು ಕಂಡುಬಂದಿತ್ತು. ಸೀಟು ಕೊಡಿಸುವುದಾಗಿ ಹೇಳಿ 1.25 ಲಕ್ಷ ರೂ. ವಂಚಿಸಿದ್ದ.

ಇದೇ ರೀತಿ ಆರೋಪಿ ರಾಜೇಶ್ವರ್ ಹಲವರಿಗೆ ವಂಚಿಸಿರುವುದು ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿತ್ತು. ಸಿಮ್ ಸಿಕ್ಕಿದ್ದು ಹೇಗೆ ಎಂದು ತಪಾಸಣೆ ನಡೆಸಿದ ವೇಳೆ ಏರ್ಟೆಲ್ ಕಂಪನಿಯ ಇಬ್ಬರು ಸೇಲ್ಸ್ ಎಕ್ಸಿಕ್ಯೂಟಿವ್ ಗಳೇ ಈತನಿಗೆ ಸಹಕಾರ ನೀಡಿರುವುದು ಗಮನಕ್ಕೆ ಬಂದಿತ್ತು. ಅದರಂತೆ, ಪೊಲೀಸರು ಸೈಬರ್ ವಂಚಕನಿಗೆ ಸಹಕಾರ ನೀಡಿರುವ ಆರೋಪದಲ್ಲಿ ಇಬ್ಬರು ಎಕ್ಸಿಕ್ಯುಟಿವ್ ಗಳನ್ನು ಬಂಧಿಸಿದ್ದಾರೆ.

ನಮ್ಮ ಬಳಿಯಿಂದಲೇ ಹೆಚ್ಚುವರಿ ದಾಖಲಾತಿ ಪಡೆದು ಪ್ರತ್ಯೇಕ ಸಿಮ್ ಖರೀದಿ ಮಾಡುತ್ತಿದ್ದ ಇವರು, ಅದನ್ನ ಸೈಬರ್ ವಂಚಕರಿಗೆ ನೀಡುತ್ತಿದ್ದರು. ಏರ್ಟೆಲ್ ಕಚೇರಿಯಲ್ಲೇ ಕುಳಿತು ಸೈಬರ್ ವಂಚಕರ ಪರ ಕೆಲಸ ಮಾಡುತ್ತಿದ್ದರು. ಗ್ರಾಹಕರ ಬಳಿ ಹೆಚ್ಚುವರಿ ದಾಖಲಾತಿ ಶೇಖರಿಸಿ ಸಿಮ್ ಗಳನ್ನು ಪಡೆಯುತ್ತಿದ್ದ ಆರೋಪಿಗಳು, ಅದನ್ನು ಸೈಬರ್ ವಂಚಕರಿಗೆ ನೀಡುತ್ತಿದ್ದರು.
Bangalore Two Airtel executives staffs arrested for using customers sim and committing cyber crime. The duo have duped people in lakhs.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am