ಬ್ರೇಕಿಂಗ್ ನ್ಯೂಸ್
04-03-22 02:12 pm Bengaluru Correspondent ಕ್ರೈಂ
ಬೆಂಗಳೂರು, ಮಾ.4: ಏರ್ಟೆಲ್ ಸಿಮ್ ಹೊಂದಿರುವ ಗ್ರಾಹಕರೇ ಎಚ್ಚರ. ನಿಮ್ಮ ಹೆಸರಲ್ಲೇ ಸಿಮ್ ಪಡೆದು ಸೈಬರ್ ವಂಚನೆ ಮಾಡೋರಿದ್ದಾರೆ, ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಏರ್ಟೆಲ್ ಕಂಪನಿಯ ಇಬ್ಬರು ಎಕ್ಸಿಕ್ಯುಟಿವ್ ಗಳನ್ನೇ ಬಂಧಿಸಿದ್ದಾರೆ.
ಹರ್ಷ(24) ಹಾಗೂ ಚೇತನ್(27) ಬಂಧಿತ ಆರೋಪಿಗಳು. ಕಳೆದ ಜನವರಿಯಲ್ಲಿ ರಾಜೇಶ್ವರ್ ಎಂಬ ಸೈಬರ್ ವಂಚಕನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ರೇವಾ ಯುನಿವರ್ಸಿಟಿಯಲ್ಲಿ ಸೀಟು ಕೊಡಿಸೋದಾಗಿ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿತ್ತು. ಆತನ ಸಿಮ್ ತಪಾಸಣೆ ನಡೆಸಿದಾಗ, ನಕಲಿ ಸಿಮ್ ಮೂಲಕ ಕರೆ ಮಾಡಿದ್ದು ಕಂಡುಬಂದಿತ್ತು. ಸೀಟು ಕೊಡಿಸುವುದಾಗಿ ಹೇಳಿ 1.25 ಲಕ್ಷ ರೂ. ವಂಚಿಸಿದ್ದ.

ಇದೇ ರೀತಿ ಆರೋಪಿ ರಾಜೇಶ್ವರ್ ಹಲವರಿಗೆ ವಂಚಿಸಿರುವುದು ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿತ್ತು. ಸಿಮ್ ಸಿಕ್ಕಿದ್ದು ಹೇಗೆ ಎಂದು ತಪಾಸಣೆ ನಡೆಸಿದ ವೇಳೆ ಏರ್ಟೆಲ್ ಕಂಪನಿಯ ಇಬ್ಬರು ಸೇಲ್ಸ್ ಎಕ್ಸಿಕ್ಯೂಟಿವ್ ಗಳೇ ಈತನಿಗೆ ಸಹಕಾರ ನೀಡಿರುವುದು ಗಮನಕ್ಕೆ ಬಂದಿತ್ತು. ಅದರಂತೆ, ಪೊಲೀಸರು ಸೈಬರ್ ವಂಚಕನಿಗೆ ಸಹಕಾರ ನೀಡಿರುವ ಆರೋಪದಲ್ಲಿ ಇಬ್ಬರು ಎಕ್ಸಿಕ್ಯುಟಿವ್ ಗಳನ್ನು ಬಂಧಿಸಿದ್ದಾರೆ.

ನಮ್ಮ ಬಳಿಯಿಂದಲೇ ಹೆಚ್ಚುವರಿ ದಾಖಲಾತಿ ಪಡೆದು ಪ್ರತ್ಯೇಕ ಸಿಮ್ ಖರೀದಿ ಮಾಡುತ್ತಿದ್ದ ಇವರು, ಅದನ್ನ ಸೈಬರ್ ವಂಚಕರಿಗೆ ನೀಡುತ್ತಿದ್ದರು. ಏರ್ಟೆಲ್ ಕಚೇರಿಯಲ್ಲೇ ಕುಳಿತು ಸೈಬರ್ ವಂಚಕರ ಪರ ಕೆಲಸ ಮಾಡುತ್ತಿದ್ದರು. ಗ್ರಾಹಕರ ಬಳಿ ಹೆಚ್ಚುವರಿ ದಾಖಲಾತಿ ಶೇಖರಿಸಿ ಸಿಮ್ ಗಳನ್ನು ಪಡೆಯುತ್ತಿದ್ದ ಆರೋಪಿಗಳು, ಅದನ್ನು ಸೈಬರ್ ವಂಚಕರಿಗೆ ನೀಡುತ್ತಿದ್ದರು.
Bangalore Two Airtel executives staffs arrested for using customers sim and committing cyber crime. The duo have duped people in lakhs.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm