ಬ್ರೇಕಿಂಗ್ ನ್ಯೂಸ್
04-03-22 02:12 pm Bengaluru Correspondent ಕ್ರೈಂ
ಬೆಂಗಳೂರು, ಮಾ.4: ಏರ್ಟೆಲ್ ಸಿಮ್ ಹೊಂದಿರುವ ಗ್ರಾಹಕರೇ ಎಚ್ಚರ. ನಿಮ್ಮ ಹೆಸರಲ್ಲೇ ಸಿಮ್ ಪಡೆದು ಸೈಬರ್ ವಂಚನೆ ಮಾಡೋರಿದ್ದಾರೆ, ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಏರ್ಟೆಲ್ ಕಂಪನಿಯ ಇಬ್ಬರು ಎಕ್ಸಿಕ್ಯುಟಿವ್ ಗಳನ್ನೇ ಬಂಧಿಸಿದ್ದಾರೆ.
ಹರ್ಷ(24) ಹಾಗೂ ಚೇತನ್(27) ಬಂಧಿತ ಆರೋಪಿಗಳು. ಕಳೆದ ಜನವರಿಯಲ್ಲಿ ರಾಜೇಶ್ವರ್ ಎಂಬ ಸೈಬರ್ ವಂಚಕನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ರೇವಾ ಯುನಿವರ್ಸಿಟಿಯಲ್ಲಿ ಸೀಟು ಕೊಡಿಸೋದಾಗಿ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿತ್ತು. ಆತನ ಸಿಮ್ ತಪಾಸಣೆ ನಡೆಸಿದಾಗ, ನಕಲಿ ಸಿಮ್ ಮೂಲಕ ಕರೆ ಮಾಡಿದ್ದು ಕಂಡುಬಂದಿತ್ತು. ಸೀಟು ಕೊಡಿಸುವುದಾಗಿ ಹೇಳಿ 1.25 ಲಕ್ಷ ರೂ. ವಂಚಿಸಿದ್ದ.

ಇದೇ ರೀತಿ ಆರೋಪಿ ರಾಜೇಶ್ವರ್ ಹಲವರಿಗೆ ವಂಚಿಸಿರುವುದು ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿತ್ತು. ಸಿಮ್ ಸಿಕ್ಕಿದ್ದು ಹೇಗೆ ಎಂದು ತಪಾಸಣೆ ನಡೆಸಿದ ವೇಳೆ ಏರ್ಟೆಲ್ ಕಂಪನಿಯ ಇಬ್ಬರು ಸೇಲ್ಸ್ ಎಕ್ಸಿಕ್ಯೂಟಿವ್ ಗಳೇ ಈತನಿಗೆ ಸಹಕಾರ ನೀಡಿರುವುದು ಗಮನಕ್ಕೆ ಬಂದಿತ್ತು. ಅದರಂತೆ, ಪೊಲೀಸರು ಸೈಬರ್ ವಂಚಕನಿಗೆ ಸಹಕಾರ ನೀಡಿರುವ ಆರೋಪದಲ್ಲಿ ಇಬ್ಬರು ಎಕ್ಸಿಕ್ಯುಟಿವ್ ಗಳನ್ನು ಬಂಧಿಸಿದ್ದಾರೆ.

ನಮ್ಮ ಬಳಿಯಿಂದಲೇ ಹೆಚ್ಚುವರಿ ದಾಖಲಾತಿ ಪಡೆದು ಪ್ರತ್ಯೇಕ ಸಿಮ್ ಖರೀದಿ ಮಾಡುತ್ತಿದ್ದ ಇವರು, ಅದನ್ನ ಸೈಬರ್ ವಂಚಕರಿಗೆ ನೀಡುತ್ತಿದ್ದರು. ಏರ್ಟೆಲ್ ಕಚೇರಿಯಲ್ಲೇ ಕುಳಿತು ಸೈಬರ್ ವಂಚಕರ ಪರ ಕೆಲಸ ಮಾಡುತ್ತಿದ್ದರು. ಗ್ರಾಹಕರ ಬಳಿ ಹೆಚ್ಚುವರಿ ದಾಖಲಾತಿ ಶೇಖರಿಸಿ ಸಿಮ್ ಗಳನ್ನು ಪಡೆಯುತ್ತಿದ್ದ ಆರೋಪಿಗಳು, ಅದನ್ನು ಸೈಬರ್ ವಂಚಕರಿಗೆ ನೀಡುತ್ತಿದ್ದರು.
Bangalore Two Airtel executives staffs arrested for using customers sim and committing cyber crime. The duo have duped people in lakhs.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm