ಬ್ರೇಕಿಂಗ್ ನ್ಯೂಸ್
05-03-22 11:05 am Mangalore Correspondent ಕ್ರೈಂ
ಉಳ್ಳಾಲ, ಮಾ.5: ರಿಟ್ಝ್ ಕಾರಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವನ್ನು ತಡೆದು ಎರಡು ಲಕ್ಷ ರೂಪಾಯಿ ದರೋಡೆಗೈದು ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದ ಘಟನೆ ರಾ.ಹೆ. 66ರ ಆಡಂಕುದ್ರು ಎಂಬಲ್ಲಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಾಫ(47) ತಲವಾರಿನ ಏಟಿನಿಂದ ಗಂಭೀರ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 6.15ರ ವೇಳೆಗೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಮುಸ್ತಾಫ ಅವರು ಎಂದಿನಂತೆ ಬೆಳಗ್ಗೆ ತನ್ನ ಏಸ್ ಟೆಂಪೋದಲ್ಲಿ ಮಂಗಳೂರಿನ ದಕ್ಕೆಗೆ ಮೀನು ತರಲೆಂದು ಹೊರಟಿದ್ದರು. ಟೆಂಪೋದಲ್ಲಿ ಮಾಸ್ತಿಕಟ್ಟೆಯ ಮೂಸ ಎಂಬವರು ಜೊತೆಗೆ ಪಯಣಿಸುತ್ತಿದ್ದರು. ಟೆಂಪೊ ಆಡಂಕುದ್ರು ತಲುಪುತ್ತಿದ್ದಂತೆಯೇ ಹಿಂದಿನಿಂದ ಧಾವಿಸಿ ಬಂದ ಕೆಂಪು ಬಣ್ಣದ ರಿಟ್ಝ್ ಕಾರು ಮುಸ್ತಾಫ ಅವರನ್ನ ತಡೆದು ನಿಲ್ಲಿಸಿದೆ.

ರಿಟ್ಝ್ ಕಾರಲ್ಲಿ ಮೂರು ಮುಸಕುಧಾರಿಗಳಿದ್ದು ಇಬ್ಬರು ಕೆಳಗಿಳಿದು ಮುಸ್ತಾಫ ಅವರಲ್ಲಿದ್ದ ಹಣದ ಬ್ಯಾಗನ್ನ ಕೊಡುವಂತೆ ಹೇಳಿದ್ದಾರೆ. ಟೆಂಪೋದಲ್ಲಿಯೇ ಇದ್ದ ಮುಸ್ತಾಫ ಅವರು ಹಣ ಕೊಡಲು ನಿರಾಕರಿಸಿದ್ದಾರೆ. ಈ ವೇಳೆ ಮುಸುಕುಧಾರಿಗಳು ತಲವಾರನ್ನ ಮುಸ್ತಾಫ ಅವರ ಕುತ್ತಿಗೆಗೆ ಇಟ್ಟು ಹಣ ಎಗರಿಸಿದ್ದು ವಿರೋಧಿಸಿದ ಮುಸ್ತಾಫ ಅವರು ತಲವಾರಿನ ಅಲಗನ್ನು ಗಟ್ಟಿಯಾಗಿ ಎರಡು ಕೈಗಳಲ್ಲಿ ಹಿಡಿದಿದ್ದು ಆಗಂತುಕರು ತಲವಾರನ್ನ ಎಳೆದಾಗ ಎರಡೂ ಕೈಗಳಿಗೂ ಗಂಭೀರ ಗಾಯಗಳಾಗಿದೆ.

ಮುಸ್ತಾಫ ಅವರಲ್ಲಿದ್ದ 2 ಲಕ್ಷ 5 ಸಾವಿರ ರೂಪಾಯಿಗಳನ್ನ ದರೋಡೆಕೋರರು ದೋಚಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರೋಡೆ ನಡೆದ ಸ್ಥಳಕ್ಕೆ ಎಸಿಪಿ ದಿನಕರ ಶೆಟ್ಟಿ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸಿಸಿ ಕ್ಯಾಮೆರಾ ಫೂಟೇಜನ್ನ ಪರಿಶೀಲನೆ ನಡೆಸಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಸ್ತಾಫ ಅವರು ಕಲ್ಲಾಪಿನ ಪೆಟ್ರೋಲ್ ಬಂಕ್ ಎದುರುಗಡೆ ಕಳೆದ ಹಲವು ವರುಷಗಳಿಂದ ಮೀನಿನ ವ್ಯಾಪಾರ ನಡೆಸುತ್ತಿದ್ದು, ಲಕ್ಷ ರೂಪಾಯಿಗಳ ಮಟ್ಟದ ವಹಿವಾಟು ನಡೆಸುವವರು. ಯಾವತ್ತೂ ಲಕ್ಷಗಟ್ಟಲೆ ಹಣ ಹಿಡಿದು ಇವರು ಧಕ್ಕೆಗೆ ತೆರಳುತ್ತಿದ್ದು, ಇವತ್ತು ಎರಡು ಲಕ್ಷದ ಕಡಿಮೆ ಮೊತ್ತದ ಹಣ ಇಟ್ಟಿದ್ದರೆನ್ನಲಾಗಿದೆ. ಈ ಬಗ್ಗೆ ಮಾಹಿತಿ ಇರುವವರೇ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ.
Mangalore Miscreants attack fish tempo driver with sword in Ullal. Mustfa who was on his way back to home was stopped by miscreants who came in Ritz car and was attacked with swords. Dcp Dhinikar Shetty and team are now investigating the case
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am