ಬ್ರೇಕಿಂಗ್ ನ್ಯೂಸ್
05-03-22 11:05 am Mangalore Correspondent ಕ್ರೈಂ
ಉಳ್ಳಾಲ, ಮಾ.5: ರಿಟ್ಝ್ ಕಾರಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವನ್ನು ತಡೆದು ಎರಡು ಲಕ್ಷ ರೂಪಾಯಿ ದರೋಡೆಗೈದು ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದ ಘಟನೆ ರಾ.ಹೆ. 66ರ ಆಡಂಕುದ್ರು ಎಂಬಲ್ಲಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಾಫ(47) ತಲವಾರಿನ ಏಟಿನಿಂದ ಗಂಭೀರ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 6.15ರ ವೇಳೆಗೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಮುಸ್ತಾಫ ಅವರು ಎಂದಿನಂತೆ ಬೆಳಗ್ಗೆ ತನ್ನ ಏಸ್ ಟೆಂಪೋದಲ್ಲಿ ಮಂಗಳೂರಿನ ದಕ್ಕೆಗೆ ಮೀನು ತರಲೆಂದು ಹೊರಟಿದ್ದರು. ಟೆಂಪೋದಲ್ಲಿ ಮಾಸ್ತಿಕಟ್ಟೆಯ ಮೂಸ ಎಂಬವರು ಜೊತೆಗೆ ಪಯಣಿಸುತ್ತಿದ್ದರು. ಟೆಂಪೊ ಆಡಂಕುದ್ರು ತಲುಪುತ್ತಿದ್ದಂತೆಯೇ ಹಿಂದಿನಿಂದ ಧಾವಿಸಿ ಬಂದ ಕೆಂಪು ಬಣ್ಣದ ರಿಟ್ಝ್ ಕಾರು ಮುಸ್ತಾಫ ಅವರನ್ನ ತಡೆದು ನಿಲ್ಲಿಸಿದೆ.
ರಿಟ್ಝ್ ಕಾರಲ್ಲಿ ಮೂರು ಮುಸಕುಧಾರಿಗಳಿದ್ದು ಇಬ್ಬರು ಕೆಳಗಿಳಿದು ಮುಸ್ತಾಫ ಅವರಲ್ಲಿದ್ದ ಹಣದ ಬ್ಯಾಗನ್ನ ಕೊಡುವಂತೆ ಹೇಳಿದ್ದಾರೆ. ಟೆಂಪೋದಲ್ಲಿಯೇ ಇದ್ದ ಮುಸ್ತಾಫ ಅವರು ಹಣ ಕೊಡಲು ನಿರಾಕರಿಸಿದ್ದಾರೆ. ಈ ವೇಳೆ ಮುಸುಕುಧಾರಿಗಳು ತಲವಾರನ್ನ ಮುಸ್ತಾಫ ಅವರ ಕುತ್ತಿಗೆಗೆ ಇಟ್ಟು ಹಣ ಎಗರಿಸಿದ್ದು ವಿರೋಧಿಸಿದ ಮುಸ್ತಾಫ ಅವರು ತಲವಾರಿನ ಅಲಗನ್ನು ಗಟ್ಟಿಯಾಗಿ ಎರಡು ಕೈಗಳಲ್ಲಿ ಹಿಡಿದಿದ್ದು ಆಗಂತುಕರು ತಲವಾರನ್ನ ಎಳೆದಾಗ ಎರಡೂ ಕೈಗಳಿಗೂ ಗಂಭೀರ ಗಾಯಗಳಾಗಿದೆ.
ಮುಸ್ತಾಫ ಅವರಲ್ಲಿದ್ದ 2 ಲಕ್ಷ 5 ಸಾವಿರ ರೂಪಾಯಿಗಳನ್ನ ದರೋಡೆಕೋರರು ದೋಚಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರೋಡೆ ನಡೆದ ಸ್ಥಳಕ್ಕೆ ಎಸಿಪಿ ದಿನಕರ ಶೆಟ್ಟಿ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸಿಸಿ ಕ್ಯಾಮೆರಾ ಫೂಟೇಜನ್ನ ಪರಿಶೀಲನೆ ನಡೆಸಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಸ್ತಾಫ ಅವರು ಕಲ್ಲಾಪಿನ ಪೆಟ್ರೋಲ್ ಬಂಕ್ ಎದುರುಗಡೆ ಕಳೆದ ಹಲವು ವರುಷಗಳಿಂದ ಮೀನಿನ ವ್ಯಾಪಾರ ನಡೆಸುತ್ತಿದ್ದು, ಲಕ್ಷ ರೂಪಾಯಿಗಳ ಮಟ್ಟದ ವಹಿವಾಟು ನಡೆಸುವವರು. ಯಾವತ್ತೂ ಲಕ್ಷಗಟ್ಟಲೆ ಹಣ ಹಿಡಿದು ಇವರು ಧಕ್ಕೆಗೆ ತೆರಳುತ್ತಿದ್ದು, ಇವತ್ತು ಎರಡು ಲಕ್ಷದ ಕಡಿಮೆ ಮೊತ್ತದ ಹಣ ಇಟ್ಟಿದ್ದರೆನ್ನಲಾಗಿದೆ. ಈ ಬಗ್ಗೆ ಮಾಹಿತಿ ಇರುವವರೇ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ.
Mangalore Miscreants attack fish tempo driver with sword in Ullal. Mustfa who was on his way back to home was stopped by miscreants who came in Ritz car and was attacked with swords. Dcp Dhinikar Shetty and team are now investigating the case
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm