ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm