ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am