ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm