ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am