ಬ್ರೇಕಿಂಗ್ ನ್ಯೂಸ್
07-03-22 12:08 pm Mangalore Correspondent ಕ್ರೈಂ
ಮಂಗಳೂರು, ಮಾ.5:ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನನ್ನು ಬೀದಿನಾಯಿ ಎಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಇದಕ್ಕೆ ಸಚಿವ ಈಶ್ವರಪ್ಪ ಕಾರಣ ಎಂದು ಆರೋಪಿಸಿದ್ದ ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
2015ರಲ್ಲಿ ಮಹಮ್ಮದ್ ಪೈಗಂಬರ್ ವಿರುದ್ಧ ಪೋಸ್ಟ್ ಮಾಡಿದ್ದ ಹರ್ಷನಿಗೆ ತಕ್ಕ ಶಾಸ್ತಿಯಾಗಿದೆ. ಪ್ರವಾದಿ ವಿರುದ್ಧ ಪೋಸ್ಟ್ ಮಾಡಿದ್ದವರಿಗೆಲ್ಲ ಇಂಥದ್ದೇ ಶಾಸ್ತಿಯಾಗಲಿದೆ ಎಂದು ಪೋಸ್ಟ್ ನಲ್ಲಿ ಬರೆಯಲಾಗಿತ್ತು. ಅಲ್ಲದೆ, ಸಚಿವ ಈಶ್ವರಪ್ಪನನ್ನು ಮಂಪರು ಪರೀಕ್ಷೆ ನಡೆಸಿದರೆ ಇದರ ಹಿಂದೆ ಯಾರಿದ್ದಾರೆ, ಯಾರು ಸುಪಾರಿ ಕೊಟ್ಟಿದ್ದಾರೆ ಎನ್ನೋದು ತಿಳಿದುಬರಬಹುದು ಎಂದು ಆರೋಪ ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿ, ತನಿಖೆ ನಡೆಸಿದ್ದರು. ಅಲ್ಲದೆ, ಫೇಸ್ಬುಕ್ ಪೇಜ್ ಅನ್ನು ಬ್ಲಾಕ್ ಮಾಡಲು ಫೇಸ್ಬುಕ್ ಕಂಪನಿಗೂ ದೂರು ಬರೆದಿದ್ದರು.

ಈ ಹಿಂದೆಯೂ ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ಹೆಸರಲ್ಲಿ ಹಿಂದು ದೇವರ ಅವಹೇಳನ, ಹಿಂದು ಸಂಘಟನೆಗಳ ನಾಯಕರ ಬಗ್ಗೆ ಅವಹೇಳನಕಾರಿ, ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕಿದ್ದು ನಡೆದಿತ್ತು. 2016ರಲ್ಲಿ ಕಟೀಲು ದೇವರ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದು ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಆನಂತರ, ಆ ಫೇಸ್ಬುಕ್ ಪೇಜನ್ನು ಬ್ಲಾಕ್ ಮಾಡಲಾಗಿತ್ತು. ಆದರೆ ಅದರ ಹಿಂದೆ ಯಾರಿದ್ದಾರೆ, ಆರೋಪಿಗಳು ಯಾರೆಂದು ಪತ್ತೆಹಚ್ಚಲು ಪೊಲೀಸರಿಂದ ಸಾಧ್ಯವಾಗಿರಲಿಲ್ಲ.
ಈಗ ಅದೇ ರೀತಿಯಲ್ಲಿ ಒಂದಕ್ಷರ ಆಲ್ಫಾಬೆಟ್ ಬದಲಿಸಿ, ಹೊಸತಾಗಿ ಪೇಜ್ ಆರಂಭಿಸಲಾಗಿತ್ತು. ಅಲ್ಲದೆ, ಮತ್ತೆ ಹಿಂದುಗಳ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಬರೆಯಲಾಗಿತ್ತು. ಮೊನ್ನೆ ಶಿವಮೊಗ್ಗದಲ್ಲಿ ಹಿಂದು ಸಂಘಟನೆಯ ಹರ್ಷ ಕೊಲೆಯಾದ ಸಂಧರ್ಭದಲ್ಲಿ ಉದ್ದೇಶಪೂರ್ವಕವಾಗಿ ಪೋಸ್ಟ್ ಮಾಡಿದ್ದು ಅದರ ಕಾಪಿ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಬಗ್ಗೆ ಸುಮೊಟೊ ಪ್ರಕರಣ ದಾಖಲಿಸಿದ್ದ ಮಂಗಳೂರು ಪೊಲೀಸರು ಅದಕ್ಕೆ ಲೈಕ್ಸ್ ಕೊಟ್ಟವರ ಮೇಲೂ ಕ್ರಮ ಜರುಗಿಸುತ್ತೇವೆ ಎಂದಿದ್ದರು. ಮಂಗಳೂರು ಕಮಿಷನರೇಟ್ ಕಚೇರಿಯಲ್ಲಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡುವ ಸಲುವಾಗಿ ಪ್ರತ್ಯೇಕ ಕಚೇರಿ ಒಂದನ್ನು ತೆರೆದಿದ್ದಲ್ಲದೆ, 24 ಗಂಟೆ ಸಿಬಂದಿಯನ್ನು ನಿಯೋಜಿಸಲಾಗಿತ್ತು. ಇದೀಗ ಸಿಐಡಿ ಅಧಿಕಾರಿಗಳು ಪ್ರಕರಣದ ವಿಚಾರಣೆ ಎತ್ತಿಕೊಂಡಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
The Criminal investigation department (CID) has initiated a probe against the ‘Mangalore Muslims’ Facebook (FB) page for allegedly posting derogatory content about the brutal murder of Bajrang Dal activist Harsha.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am