ಬ್ರೇಕಿಂಗ್ ನ್ಯೂಸ್
07-03-22 12:08 pm Mangalore Correspondent ಕ್ರೈಂ
ಮಂಗಳೂರು, ಮಾ.5:ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನನ್ನು ಬೀದಿನಾಯಿ ಎಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಇದಕ್ಕೆ ಸಚಿವ ಈಶ್ವರಪ್ಪ ಕಾರಣ ಎಂದು ಆರೋಪಿಸಿದ್ದ ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
2015ರಲ್ಲಿ ಮಹಮ್ಮದ್ ಪೈಗಂಬರ್ ವಿರುದ್ಧ ಪೋಸ್ಟ್ ಮಾಡಿದ್ದ ಹರ್ಷನಿಗೆ ತಕ್ಕ ಶಾಸ್ತಿಯಾಗಿದೆ. ಪ್ರವಾದಿ ವಿರುದ್ಧ ಪೋಸ್ಟ್ ಮಾಡಿದ್ದವರಿಗೆಲ್ಲ ಇಂಥದ್ದೇ ಶಾಸ್ತಿಯಾಗಲಿದೆ ಎಂದು ಪೋಸ್ಟ್ ನಲ್ಲಿ ಬರೆಯಲಾಗಿತ್ತು. ಅಲ್ಲದೆ, ಸಚಿವ ಈಶ್ವರಪ್ಪನನ್ನು ಮಂಪರು ಪರೀಕ್ಷೆ ನಡೆಸಿದರೆ ಇದರ ಹಿಂದೆ ಯಾರಿದ್ದಾರೆ, ಯಾರು ಸುಪಾರಿ ಕೊಟ್ಟಿದ್ದಾರೆ ಎನ್ನೋದು ತಿಳಿದುಬರಬಹುದು ಎಂದು ಆರೋಪ ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿ, ತನಿಖೆ ನಡೆಸಿದ್ದರು. ಅಲ್ಲದೆ, ಫೇಸ್ಬುಕ್ ಪೇಜ್ ಅನ್ನು ಬ್ಲಾಕ್ ಮಾಡಲು ಫೇಸ್ಬುಕ್ ಕಂಪನಿಗೂ ದೂರು ಬರೆದಿದ್ದರು.

ಈ ಹಿಂದೆಯೂ ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ಹೆಸರಲ್ಲಿ ಹಿಂದು ದೇವರ ಅವಹೇಳನ, ಹಿಂದು ಸಂಘಟನೆಗಳ ನಾಯಕರ ಬಗ್ಗೆ ಅವಹೇಳನಕಾರಿ, ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕಿದ್ದು ನಡೆದಿತ್ತು. 2016ರಲ್ಲಿ ಕಟೀಲು ದೇವರ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದು ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಆನಂತರ, ಆ ಫೇಸ್ಬುಕ್ ಪೇಜನ್ನು ಬ್ಲಾಕ್ ಮಾಡಲಾಗಿತ್ತು. ಆದರೆ ಅದರ ಹಿಂದೆ ಯಾರಿದ್ದಾರೆ, ಆರೋಪಿಗಳು ಯಾರೆಂದು ಪತ್ತೆಹಚ್ಚಲು ಪೊಲೀಸರಿಂದ ಸಾಧ್ಯವಾಗಿರಲಿಲ್ಲ.
ಈಗ ಅದೇ ರೀತಿಯಲ್ಲಿ ಒಂದಕ್ಷರ ಆಲ್ಫಾಬೆಟ್ ಬದಲಿಸಿ, ಹೊಸತಾಗಿ ಪೇಜ್ ಆರಂಭಿಸಲಾಗಿತ್ತು. ಅಲ್ಲದೆ, ಮತ್ತೆ ಹಿಂದುಗಳ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಬರೆಯಲಾಗಿತ್ತು. ಮೊನ್ನೆ ಶಿವಮೊಗ್ಗದಲ್ಲಿ ಹಿಂದು ಸಂಘಟನೆಯ ಹರ್ಷ ಕೊಲೆಯಾದ ಸಂಧರ್ಭದಲ್ಲಿ ಉದ್ದೇಶಪೂರ್ವಕವಾಗಿ ಪೋಸ್ಟ್ ಮಾಡಿದ್ದು ಅದರ ಕಾಪಿ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಬಗ್ಗೆ ಸುಮೊಟೊ ಪ್ರಕರಣ ದಾಖಲಿಸಿದ್ದ ಮಂಗಳೂರು ಪೊಲೀಸರು ಅದಕ್ಕೆ ಲೈಕ್ಸ್ ಕೊಟ್ಟವರ ಮೇಲೂ ಕ್ರಮ ಜರುಗಿಸುತ್ತೇವೆ ಎಂದಿದ್ದರು. ಮಂಗಳೂರು ಕಮಿಷನರೇಟ್ ಕಚೇರಿಯಲ್ಲಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡುವ ಸಲುವಾಗಿ ಪ್ರತ್ಯೇಕ ಕಚೇರಿ ಒಂದನ್ನು ತೆರೆದಿದ್ದಲ್ಲದೆ, 24 ಗಂಟೆ ಸಿಬಂದಿಯನ್ನು ನಿಯೋಜಿಸಲಾಗಿತ್ತು. ಇದೀಗ ಸಿಐಡಿ ಅಧಿಕಾರಿಗಳು ಪ್ರಕರಣದ ವಿಚಾರಣೆ ಎತ್ತಿಕೊಂಡಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
The Criminal investigation department (CID) has initiated a probe against the ‘Mangalore Muslims’ Facebook (FB) page for allegedly posting derogatory content about the brutal murder of Bajrang Dal activist Harsha.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm