ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm