ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
26-06-25 07:40 pm
HK News Desk
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm