ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am