ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm