ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm