ಬ್ರೇಕಿಂಗ್ ನ್ಯೂಸ್
08-03-22 04:15 pm HK Desk ಕ್ರೈಂ
ಶಿವಮೊಗ್ಗ, ಮಾ.8: ರಾಜ್ಯದಲ್ಲಿ ಸಂಚಲನ ಎಬ್ಬಿಸಿದ ಹಿಂದು ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾದ ಹತ್ತು ಮಂದಿ ಆರೋಪಿಗಳ ವಿರುದ್ಧ ದೇಶದ್ರೋಹದ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುಎಪಿಎ ಕಾಯ್ದೆಯಡಿ ಕೇಸು ದಾಖಲು ಮಾಡಿರುವುದರಿಂದ ಪ್ರಕರಣವನ್ನು ಸದ್ಯದಲ್ಲೇ ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಯುಎಪಿಎ ಕಾಯ್ದೆಯನ್ನು ಸಾಮಾನ್ಯವಾಗಿ ರಾಷ್ಟ್ರೀಯ ಭದ್ರತೆ ಮತ್ತು ಆಂತರಿಕ ಸಮಗ್ರತೆಗೆ ಧಕ್ಕೆಯಾದ ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಅನ್ವಯ ಮಾಡಲಾಗುತ್ತದೆ. ಆದರೆ ಇಲ್ಲಿ ಒಂದು ಕೊಲೆ ಪ್ರಕರಣಕ್ಕೂ ಆರೋಪಿಗಳನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಿದ್ದು ಆಕ್ಷೇಪಕ್ಕೂ ಕಾರಣವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೇಶದ್ರೋಹದ ಕಾಯ್ದೆ ಅಳವಡಿಸಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಯುಎಪಿಎ ಕಾಯ್ದೆ ಪ್ರಕಾರ, ಆರೋಪಿಗಳನ್ನು ಪೊಲೀಸರು 30 ದಿನಗಳ ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಳ್ಳಲು ಸಾಧ್ಯವಿರುತ್ತದೆ. ಅಲ್ಲದೆ, ಪ್ರಕರಣದಲ್ಲಿ ತನಿಖಾಧಿಕಾರಿಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು 90 ದಿನಗಳ ಬದಲಿಗೆ 180 ದಿನಗಳ ವರೆಗೂ ಅವಕಾಶ ಇರುತ್ತದೆ. ಫೆ.20ರಂದು ರಾತ್ರಿ ನಡೆದ ಹರ್ಷ ಕೊಲೆ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದ್ವೇಷದ ಅಹಿತಕರ ಘಟನೆ ನಡೆಯಲು ಕಾರಣವಾಗಿತ್ತು. ಇದೇ ವೇಳೆ, ಈ ಕೊಲೆಯ ಹಿಂದೆ ಪಿಎಫ್ಐ ಮತ್ತು ಎಸ್ಡಿಪಿಐ ಇದೆಯೆಂದೂ, ಅದನ್ನು ಬ್ಯಾನ್ ಮಾಡಬೇಕೆಂದು ಭಾರೀ ಆಗ್ರಹ ಕೇಳಿಬಂದಿತ್ತು.
ಈ ಮಧ್ಯೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಪಿಎಫ್ಐ ಅಥವಾ ಎಸ್ಡಿಪಿಐ ನಿಷೇಧ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಹರ್ಷನ ಮನೆಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ, ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದರು. ಕೊಲೆಯಾದ ಹರ್ಷ ಹಿಂದು ಪರ ಮತ್ತು ಹಿಜಾಬ್ ವಿರೋಧಿಸಿ ಪೋಸ್ಟ್ ಹಾಕುತ್ತಿದ್ದ. ಇದೇ ವಿಚಾರದಲ್ಲಿ ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸ್ ತನಿಖೆಯಲ್ಲಿ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎನ್ನುವ ಮಾಹಿತಿ ಹೊರಬಂದಿತ್ತು. ಇದೀಗ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ಕಂಡುಬಂದಿದೆ.
Moreover, there are possibilities that once the local police investigation is completed, the government may turn the case over to the National Investigation Agency (NIA).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm