ಬ್ರೇಕಿಂಗ್ ನ್ಯೂಸ್
10-03-22 06:43 pm HK Desk news ಕ್ರೈಂ
ಗದಗ, ಮಾ.10 :ನಾಲ್ಕು ವರ್ಷಗಳ ಹಿಂದೆ ತನ್ನ ಮೊದಲ ಮದುವೆ ಮುಚ್ಚಿಟ್ಟು ಹಿಂದು ಯುವತಿಯೊಬ್ಬಳನ್ನು ಪ್ರೀತಿಸುವ ನೆಪದಲ್ಲಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಈಗ ಆಕೆಯನ್ನ ನಡುರಸ್ತೆಯಲ್ಲೇ ಅಟ್ಟಾಡಿಸಿ ಅಮಾನುಷವಾಗಿ ಮಚ್ಚಿನಿಂದ ಹೊಡೆದು ಕೊಲ್ಲಲು ಯ್ನತ್ನಿಸಿದ ಘಟನೆ ಗದಗ ನಗರದಲ್ಲಿ ನಡೆದಿದೆ.
ಗಂಡನಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವತಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್ ಗ್ರೌಂಡ್ ಬಳಿ ಗುರುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು, ಯುವಕನ ವರ್ತನೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಅಪೂರ್ವ ಶಿರೂರ(26) ಅಲಿಯಾಸ್ ಅರ್ಫಾನ್ ಬಾನು ಹಲ್ಲೆಗೊಳಗಾದ ಮಹಿಳೆ. ಈಕೆಯ ಗಂಡ ಇಜಾಜ್ (38) ಹಲ್ಲೆಗೈದ ಆರೋಪಿ. ಹುಬ್ಬಳ್ಳಿ ಕೋಲಪೇಟೆಯ ನಿವಾಸಿ ಇಜಾಜ್ ನಾಲ್ಕು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ, ಈತನಿಗೆ ಅದಾಗಲೇ ಬೇರೊಬ್ಬಳ ಜತೆ ಮದುವೆ ಆಗಿತ್ತು. ಈ ವಿಷಯ ಮುಚ್ಚಿಟ್ಟು ಇಜಾಜ್ ಅಪೂರ್ವಳನ್ನು ಪ್ರೀತಿಯ ನಾಟಕವಾಡಿ ಮದುವೆ ಮಾಡಿಕೊಂಡಿದ್ದ.

ಮದುವೆ ಬಳಿಕ ಅಪೂರ್ವಳನ್ನು ಮುಸ್ಲಿಂ ಆಗಿ ಮತಾಂತರಿಸುವ ಪ್ರಯತ್ನವಾಗಿ ಆಕೆಯ ಹೆಸರನ್ನು ಅರ್ಫಾನ್ ಬಾನು ಎಂದು ಬದಲಿಸಿದ್ದ. ಆರಂಭದಲ್ಲಿ ಚೆನ್ನಾಗಿಯೇ ಇದ್ದ ದಂಪತಿ ನಡುವೆ ಬಳಿಕ ಕೌಟುಂಬಿಕ ಕಲಹ ಶುರುವಾಗಿತ್ತು. ಇಜಾಜ್ ಬೇರೆ ಯುವತಿ ಜೊತೆ ಮೊದಲ ಮದುವೆಯಾಗಿರುವ ವಿಚಾರ ತಿಳಿದ ಅಪೂರ್ವ, ಆತನಿಂದ ದೂರವಾಗಲು ನಿಶ್ಚಯಿಸಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ನಾಲ್ಕೈದು ತಿಂಗಳಿಂದ ಗಂಡನಿಂದ ದೂರವಾಗಿದ್ದ ಅಪೂರ್ವ, ಗುರುವಾರ ಬೆಳಗ್ಗೆ ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್ ಗ್ರೌಂಡ್ನಲ್ಲಿ ದ್ವಿಚಕ್ರ ವಾಹನದಲ್ಲಿ ಡ್ರೈವಿಂಗ್ ಕಲಿಯುತ್ತಿದ್ದಳು. ಅಲ್ಲಿಗೆ ಮಚ್ಚು ಹಿಡಿದು ಬಂದ ಇಜಾಜ್, ಪತ್ನಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಯುವತಿಯನ್ನು ಕೂಡಲೇ ಸ್ಥಳೀಯರು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಎಸ್ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Gadag Muslim man hides his first marriage and marries a Hindu girl converts her to Islam, when his second wife demands divorce he attacks her with the sword.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm