ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm