ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm