ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm