ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm