ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm