ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm