ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm