ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am