ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm