ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm