ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am