ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm