ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am